ಉಡುಪಿ, ಜು.17 (DaijiworldNews/MB) : ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು , ರೋಗಿಗಳ ಚಿಕಿತ್ಸೆ ಬಗ್ಗೆ ಹಾಲಿ ಇರುವ ವ್ಯವಸ್ಥೆಯನ್ನು ಉನ್ನತಿಕರಿಸಬೇಕಾದ ಅಗತ್ಯತೆ ಇದೆ.ಅದೇ ರೀತಿ ವೈದ್ಯರು /ಸ್ಟಾಫ್ ನರ್ಸ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗತ್ಯವಿರುತ್ತದೆ.
ಅಲ್ಲದೇ ಲ್ಯಾಬ್ ಗಳಲ್ಲಿ ಲ್ಯಾಬ್ ಟೆಕ್ನಿಷಿಯನ್ಗಳ ಕೆಲಸ ಅವಶ್ಯಕತೆ ಇರುತ್ತದೆ. ಆದುದರಿಂದ ಸ್ವಯಂ ಪ್ರೇರಿತರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ವೈದ್ಯರು, ಸ್ಟಾಫ್ ನರ್ಸ್ಗಳು ಮತ್ತು ಲ್ಯಾಬ್ ಟೆಕ್ನಿಷಿಯನ್ಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್ಗಳು ಮತ್ತು ಹೈ ಪ್ರೆಝರ್ ಆಕ್ಸಿಜನ್ ಸಿಸ್ಟಮ್ಗಳ ತೀರಾ ಅವಶ್ಯಕತೆ ಇರುವುದರಿಂದ ವೆಂಟಿಲೇಟರ್ ಹಾಗೂ ಹೈ ಪ್ರೆಝರ್ ಆಕ್ಸಿಜನ್ ಸಿಸ್ಟಮ್ಗಳನ್ನು ನೀಡಲು ಇಚ್ಚಿಸುವ ದಾನಿಗಳು /ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿ ಕಚೇರಿಗೆ ಹಸ್ತಾಂತರಿಸಿ ಕೋವಿಡ್ -19 ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಸಹಕರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.