ಬೆಳ್ತಂಗಡಿ, ಜು.18 (DaijiworldNews/SM): ಇಲ್ಲಿನ ಉಜಿರೆ ಸಮೀಪದ ಇತಿಹಾಸ ಪ್ರಸಿದ್ಧ ಸೂರ್ಯ ದೇವಸ್ಥಾನದಲ್ಲಿ ಈ ಬಾರಿಯ ಆಟಿ ಅಮವಾಸ್ಯೆಯ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಅವಕಾಶವಿಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲೂ ಸಾಮೂಹಿಕ ಪೂಜೆ ಅಥವಾ ಹಬ್ಬಗಳನ್ನು ಆಚರಿಸದಂತೆ ಜಿಲ್ಲಾಧಿಕಾರಿಯವರೂ ಆದೇಶವನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಈ ಬಾರಿಯ ಆಟಿ ಅಮವಾಸ್ಯೆಯ ತೀರ್ಥ ಸ್ನಾನ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಆದೇಶ ನೀಡಿದೆ.