ಮೂಡುಬಿದಿರೆ, ಜು. 23 (DaijiworldNews/MB) : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸೇವೆಯಲ್ಲಿ ತೊಡಗಿದ್ದ ಮಹಿಳೆ ಮತ್ತು ಅವರ ಏಳು ವರ್ಷದ ಮಗನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು ಅವರ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ. ಬಳಿಕ ದುಷ್ಕರ್ಮಿಗಳು ಯಾವುದೇ ಆಧಾರವಿಲ್ಲದೆಯೇ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು ಈ ಬಗ್ಗೆ ಸಾಮಾಜಿಕ ಅಸಮಾನತೆ ಆರೋಪ ಮಾಡಿ ಜಿಲ್ಲೆಯ ಜಿಲ್ಲಾಧಿಕಾರಿಗೆ ಕುಟುಂಬವು ದೂರು ನೀಡಿದೆ.
ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮಹಿಳೆ ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಪ್ರದೇಶದ ಕೆಲವು ಕಿಡಿಗೇಡಿಗಳು ಸರ್ಕಾರಿ ಅಧಿಕಾರಿಗಳಿಗೆ ದೂರು ನೀಡುವ ಮೂಲಕ ಅವರನ್ನು ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಜನರು ಮಾನಸಿಕವಾಗಿ ಹಿಂಸಿಸುತ್ತಿರುವ ಕಾರಣ ಅವರು ಬೇಸರಗೊಂಡಿದ್ದು ತನ್ನ ಕೆಲಸಕ್ಕೆ ರಾಜೀನಾಮೆ ನೀಡಲು ಬಯಸಿದ್ದಾರೆ ಎಂದು ಅವರು ಬರೆದ ದೂರಿನ ಪತ್ರದಲ್ಲಿ ತಿಳಿಸಿದ್ದಾರೆ.
ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಪಾಲಿಸಬವೇಕಾದ ಎಲ್ಲಾ ನಿಯಮಗಳನ್ನು ತಾನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಆದರೆ ನನ್ನ ವಿರುದ್ಧವಾಗಿ ತಾನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ ನಾನು ತೊಂದರೆಗೀಡಾಗಿದ್ದೇನೆ ಎಂದು ಹೇಳಿದ್ದಾರೆ.
"ನನ್ನ ಕೆಲಸವನ್ನು ಪೂಜೆಯೆಂದು ಪರಿಗಣಿಸುವ ಮೂಲಕ ನಾನು ಜನರಿಗೆ ಸೇವೆ ಸಲ್ಲಿಸಿದ್ದೇನೆ. ಆದರೆ ಈಗ ಸಮಾಜ ವಿರೋಧಿ ಮನಸ್ಸುಗಳು ಈಗ ನನ್ನನ್ನು ಹಿಂಸಿಸುತ್ತಿವೆ. ನನಗೆ ತುಂಬಾ ನೋವಾಗಿದೆ" ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಮಹಿಳೆಯ ಪತಿ ಮತ್ತು ನಾಲ್ಕು ವರ್ಷದ ಮಗುವಿಗೆ ಕೊರೊನಾ ಇಲ್ಲ ಎಂದು ದೃಢಪಟ್ಟಿದೆ. ಹಾಗೆಯೇ ಕುಟುಂಬದ ಯಾವುದೇ ಸದಸ್ಯರಲ್ಲಿ ಈವರೆಗೆ ರೋಗದ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ.