ಕೊಣಾಜೆ, ಜು.28 (DaijiworldNews/SM): ಭೀಕರ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಮಂಜನಾಡಿ ಬಳಿ ನಡೆದಿದೆ. ಮಂಜನಾಡಿ ತೌಡುಗೋಳಿ ಕ್ರಾಸ್ ನ ಮಹಮ್ಮದ್ ರಮೀಝ್(19) ಮೃತಪಟ್ಟ ಯುವಕನಾಗಿದ್ದಾನೆ.
ದ್ವಿಚಕ್ರ ವಾಹನ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ನಡೆದಿದೆ. ರಮೀಝ್ ಅವರು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದು ಮಧ್ಯಾಹ್ನ ವೇಳೆಯಲ್ಲಿ ಊಟಕ್ಕೆಂದು ಮನೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬರುತಿದ್ದ ಪಿಕಪ್ ಟೆಂಪೋವೊಂದು ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.