ಉಡುಪಿ, ಜು 30 (Daijiworld News/MSP): ಉಡುಪಿ ಜಿಲ್ಲೆಯ ಡಿಸಿಐಬಿ ಪೊಲೀಸರು ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿದ್ದಾರೆ. ಮೂಡಬಿದಿರೆಯ ಗುರುಪ್ರಸಾದ್ ಎಂಬಾತನನ್ನುಮಂಜಪ್ಪ ಡಿ.ಆರ್, ಪೊಲೀಸ್ ನಿರೀಕ್ಷಕರು, ಡಿಸಿಐಬಿ ಉಡುಪಿ ಇವರಿಗೆ ದೊರೆತ ಮಾಹಿತಿಯಂತೆ ಜುಲೈ 29 ರಂದು ಉಡುಪಿ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಬಳಿ ಬಂಧಿಸಿದ್ದಾರೆ.
ಆತನ ಕಳವು ಮಾಡಿದ ನಗದು ಹಣ 2,03,700/- ರೂಪಾಯಿ ನಗದು ಹಣ, ವಿವೋ ಕಂಪೆನಿ ಮೊಬೈಲ್ ಫೋನ್ ಹಾಗೂ ಇನ್ನಿತರ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈತನ ತಾನು ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕಾರಿನಿಂದ ನಗದು ಹಣವನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿರುತ್ತಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್, ಎ ಎಸ್ಪಿ ಕುಮಾರ್ ಚಂದ್ರ, ಟಿ.ಆರ್ ಜಯಶಂಕರ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಹಾಗೂ ಎಎಸ್ಐ ರವಿಚಂದ್ರ ಮತ್ತು ಅವರ ಸಿಬ್ಬಂದಿಗಳಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ್,ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.