ಮಂಗಳೂರು, ಜು. 30 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ ಶುಕ್ರವಾರದಂದು ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ ಆಚರಿಸುತ್ತಿದ್ದು, ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಆಚರಿಸಲು ಸರಕಾರದ ಆದೇಶವಿದೆ.
ಆದರೆ, ಮಂಗಳೂರು ನಗರದಲ್ಲಿರುವ ಈದ್ಗಾ ಮಸೀದಿಯಲ್ಲಿ ಹಾಗೂ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಆಚರಣೆ ಇಲ್ಲ ಎಂದು ಮಸೀದಿಯ ಅದ್ಯಕ್ಷರಾದ ಹಾಜೀ ವೈ ಅಬ್ದುಲ್ಲ ಕುಂಞಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ಕಾರಣದಿಂದಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ.