ಉಡುಪಿ, ಆ 31 (DaijiworldNews/SM): ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯವೆನಿಸಿದ ಕಡೆಗಳಲ್ಲಿ ನಿರ್ಬಂಧ ಹೆಚ್ಚಿಸಲಾಗಿದ್ದು, ಇತರ ಕಡೆಗಳಲ್ಲಿ ಸಡಿಲಗೊಳಿಸಲಾಗಿದೆ. ಆದರೆ, ಸೆಪ್ಟೆಂಬರ್ 30ರ ತನಕ ಶಾಲಾ ಕಾಲೇಜುಗಳು ಶಿಕ್ಷಣ ಸಂಸ್ಥೆಗಳು ಮುಚ್ಚಿರಲಿವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ. ಈ ಆದೇಶ ಸೆಪ್ಟೆಂಬರ್ ೧ರಿಂದಲೇ ಜಾರಿಗೆ ಬರಲಿದೆ.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಆದೇಶ ನೀಡಲಾಗಿದೆ.
1. ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೆಪ್ಟೆಂಬರ್ 30ರವರೆಗೆ ಬಂದ್ ಆಗಿರಲಿವೆ.
2. ಆನ್ಲೈನ್/ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಸಲಾಗಿದೆ.
3. 20ನೇ ತಾರೀಕಿನಿಂದ ರಿಂದ ಜಾರಿಗೆ ಬರುವಂತೆ ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ ಆನ್ಲೈನ್ ಬೋಧನೆ/ಟೆಲಿ ಸಮಾಲೋಚನೆ ಕಾರ್ಯಕ್ಕಾಗಿ ಒಮ್ಮೆಗೆ ಶಾಲೆಗಳಿಗೆ ಶೇ. 50%ರವರಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕರೆಯಲು ಅನುಮತಿಸಲಾಗುವುದು.
4. 09 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯುವುದಕ್ಕಾಗಿ ಕಂಟೈನ್ಮೆಂಟ್ ವಲಯಗಳ ಹೂರಗಿನ ಪ್ರದೇಶಗಳಲ್ಲಿ ಮಾತ್ರ ಸ್ವಇಚ್ಚೆಯ ಆಧಾರದ ಮೇಲೆ ತಮ್ಮ ಶಾಲೆಗಳಿಗೆ ಭೇಟಿ ನೀಡಲು ಅನುಮತಿಸಬಹುದಾಗಿದೆ. ಇದು ಅವರ ತಂದೆ-ತಾಯಿಗಳ ಮತ್ತು ಪೋಷಕರ ಲಿಖಿತ ಅನುಮತಿಗೆ ಒಳಪಟ್ಟಿರುತ್ತದೆ ಮತ್ತು ಇದಕ್ಕೆ 21ನೇ ಸೆಪ್ಟೆಂಬರ್ 2020 ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.
5. ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳು, ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐಗಳು), ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಅಥವಾ ರಾಜ್ಯ ಕೌಶಲ್ಯ ಅಭಿವೃದ್ಧಿ ಮಿಷನ್ನಲ್ಲಿ ಅಥವಾ ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಇತರ ಮಂತ್ರಾಲಯಗಳಲ್ಲಿ ಸಚಿವಾಲಯಗಳಲ್ಲಿ ನೋಂದಾಯಿಸಿಕೊಂಡ ಅಲ್ಪಾವಧಿ ತರಬೇತಿ ಕೇಂದ್ರಗಳಲ್ಲಿ ಕೌಶಲ್ಯ ಅಥವಾ ಉದ್ಯಮಶೀಲತೆ ತರಬೇತಿಯನ್ನು ಪಡೆಯುವುದಕ್ಕೆ ಅನುಮತಿ ನೀಡಲಾಗುವುದು.
ರಾಷ್ಟ್ರೀಯ ಉದ್ಯಮಶೀಲತೆ ಹಾಗೂ ಸಣ್ಣ ವ್ಯವಹಾರ ಅಭಿವೃದ್ಧಿ ಸಂಸ್ಥೆ, ಭಾರತೀಯ ಉದ್ಯಮಶೀಲತ ಸಂಸ್ಥೆಗೆ ಹಾಗೂ ಆ ಸಂಸ್ಥೆಯಡಿ ತರಬೇತಿ ಒದಗಿಸುವವರಿಗೆ ಸಹ ಅನುಮತಿ ನೀಡಲಾಗುವುದು. ಇವುಗಳಿಗೆ ಸೆ. 21ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.
6. ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿನ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಹಾಗೂ ಕೋವಿಡ್-19ರ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಗೃಹ ವ್ಯವಹಾರ ಮಂತ್ರಾಲಯದೊಂದಿಗೆ ಸಮಾಲೋಚಿಸಿ ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ತಾಂತ್ರಿಕ ಮತ್ತು ವೃತ್ತಿಪರ ಕಾರ್ಯಕ್ರಮಗಳ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಬಹುದಾಗಿದೆ.