ಉಡುಪಿ, ಸೆ. 11 (DaijiworldNews/MB) : ಗ್ರಹಗಳ ಚಲನೆಯ ಲೆಕ್ಕಾಚಾರದ ಪ್ರಕಾರವಾಗಿ ಸೆಪ್ಟೆಂಬರ್ 10 ರ ಗುರುವಾರ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಎಲ್ಲಾ ಗಣ್ಯರ ಸಮ್ಮುಖದಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಮುಂಜಾನೆ 12.16 ಕ್ಕೆ ಭಗವಂತನಿಗೆ ಅರ್ಘ್ಯ ಪ್ರಧಾನ ಮಾಡಿದರು.
ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ(12 .16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು. ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.
ಕೊರೊನಾ ಸಾಂಕ್ರಾಮಿಕದ ಕಾರಣದಿಂದಾಗಿ ಸುರಕ್ಷತಾ ಮುನ್ನೆಚ್ಚರಿಕೆಗಳ ಭಾಗವಾಗಿ ಸಾರ್ವಜನಿಕರಿಗೆ ಮಠ ಪ್ರವೇಶಕ್ಕೆ ನಿರ್ಬಂಧಿಸಿದ್ದರಿಂದ ಭಕ್ತರು ನೇರ ಟಿವಿ ಪ್ರಸಾರ ಮತ್ತು ಆನ್ಲೈನ್ ಮೂಲಕ 'ಅರ್ಘಾ ಪ್ರಧಾನ' ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಶ್ರೀ ಕೃಷ್ಣ ಬಾಲ್ಯದಲ್ಲಿ ತೊಡಗಿಸಿಕೊಂಡ ದೈವಿಕ ಕ್ರೀಡೆಯ ಪ್ರತೀಕ ವಿಟ್ಲಪಿಂಡಿ ಶುಕ್ರವಾರ ಆಚರಿಸಲಾಗುತ್ತಿದೆ.
ವಿಟ್ಲಪಿಂಡಿ ಶುಕ್ರವಾರ ಮಧ್ಯಾಹ್ನ ರಥಬೀದಿನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಿದ್ದು ಈ ಆಚರಣೆ ಸಂದರ್ಭದಲ್ಲಿ, ಜನರಿಗೆ ರಥಬೀದಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಠದ ಜನರು ಹಾಗೂ ಸೀಮಿತ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ, ವಿಟ್ಲಪಿಂಡಿ ಆಚರಿಸಲಾಗುತ್ತದೆ.