ಕುಂದಾಪುರ, ಸೆ. 15 (DaijiworldNews/MB) : ಎರಡು ಲಾರಿಗಳಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದ್ದು ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ದಾವಣಗೆರೆಯ ಮೆಹಬೂಬ್ (27), ಇಮ್ರಾನ್ (29), ಬೆಳಗಾವಿ ಜಿಲ್ಲೆಯ ಬಾಪು ಸಾಹೇಬ್(46), ಆಸಿಫ್ (23) ಬಂಧಿತ ಆರೋಪಿಗಳು.
ಪೊಲೀಸರು ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮವಾಗಿ ಹಾಗೂ ಹಿಂಸಾತ್ಮಾಕವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.
ಕೂಡಲೇ ಪೊಲೀಸರು ಈ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.