ಮಂಗಳೂರು, ಸೆ 17 (DaijiworldNews/PY): ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರು ಗುರುವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.
ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿರುವ ಭರತ್ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ.
ಭರತ್ ಶೆಟ್ಟಿ ಅವರಿಗೆ ಕಳೆದ ಜುಲೈ 2ರಂದು ದೃಢಪಟ್ಟಿದ್ದು, ಕ್ವಾರಂಟೈನ್ನಲ್ಲಿದ್ದರು. ಒಂದು ವಾರದ ಹಿಂದೆ ಕೊರೊನಾದಿಂದ ಗುಣಮುಖರಾಗಿರುವ ಇವರು ಕೊರೊನಾ ಪಾಸಿಟಿವ್ ದೃಢಪಟ್ಟ ವ್ಯಕ್ತಿಯೋರ್ವರಿಗೆ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ. ಈ ಹಿಂದೆ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಕೂಡಾ ಪ್ಲಾಸ್ಮಾ ದಾನ ಮಾಡಿದ್ದರು.