ಕುಂದಾಪುರ, ಸೆ 18 (DaijiworldNews/PY): ಪುದುಚೆರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಶ್ರೀಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಬಳಿಕ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸೆ.17ರ ಗುರುವಾರದಂದು ರಾತ್ರಿ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ ಅವರು ದೇವಸ್ಥಾನದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದು, ಶುಕ್ರವಾರ ಬೆಳಗ್ಗೆ 5 ಗಂಟೆಗೆ ಮೂಕಾಂಬಿಕಾ ದೇವಿ ದರ್ಶನ ಪಡೆದ ವಿಶೇಷ ಪೂಜೆ ಸಲ್ಲಿಸಿದ ನಂತರ ಚಂಡಿಕಾ ಹೋಮ ನೆರವೇರಿಸಿ, ಪೂರ್ಣಾಹುತಿ ಸಮರ್ಪಿಸಿದರು.
ಕುಂದಾಪುರ ಎಸಿ ಕೆ.ರಾಜು ಅವರು ನಾರಾಯಣ ಸ್ವಾಮಿ ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡಿದ್ದು, ದೇವಸ್ಥಾನ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಸುತುಗೋಳಿ ದೇವಸ್ಥಾನದ ಪರವಾಗಿ ಗೌರವಿಸಿದರು. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕ್ಷೇತ್ರದ ಪರವಾಗಿ ಸನ್ಮಾನಿಸಿದರು.