ಉಡುಪಿ, ಸೆ. 21 (DaijiworldNews/SM): ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಾಳ ಕುದುರೆಮುಖ ರಾ.ಹೆ.169ರಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಸೆ.೧೯ರಂದು ಮರವೊಂದು ಬಿದ್ದು ವಾಹನ ಜಖಂಗೊಂಡಿತ್ತು. ಸದ್ಯ ಬಿದ್ದಿರುವ ಮರಗಳ ತೆರವು ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ನಡುವೆ ರಸ್ತೆಯ ಕೆಲವೊಂದು ಕಡೆ ಗುಡ್ಡ ಕುಸಿತವಾಗುತ್ತಿದೆ. ಬೃಹತ್ ಗಾತ್ರದ ಮರಗಳು ಉರುಳಿ ಬೀಳುತ್ತಿವೆ.
ರಸ್ತೆಗೆ ಬಿದ್ದ ಮರಗಳ ತೆರವು ಕಾರ್ಯಾಚರಣೆ ಕಷ್ಟಕರವಾಗುತ್ತಿದೆ. ಮುಂಜಾಗೃತ ಕ್ರಮವಾಗಿ ರಸ್ತೆ ಸಂಚಾರ ಬಂದ್ ಗೊಳಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 2 ದಿನಗಳ ಕಾಲ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ನೀಡಿದ್ದಾರೆ.