ಮಂಗಳೂರು, ಅ. 14 (DaijiworldNews/MB) : ಮಂಗಳೂರು ಉಪವಿಭಾಗ ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಹಠಾತ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ನ್ಯಾಯಮಂಡಳಿ ಹೊರಡಿಸಿದ ಆದೇಶವನ್ನು ಜಾರಿಗೆ ತರುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಅವರ ನೇತೃತ್ವದ ಅಧಿಕಾರಿಗಳ ತಂಡದಿಂದ ನಗರದಲ್ಲಿನ ಅಕ್ರಮ ಬಾಕ್ಸೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದ ಲಾರಿಗಳು ಸೇರಿದಂತೆ 30 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳು ಈ ದಾಳಿಯಿಂದಾಗಿ ಕೋಪಗೊಂಡಿದ್ದರು. ಬಳಿಕ ಈ ಪ್ರಭಾವಿ ವ್ಯಕ್ತಿಗಳಿಂದ ಮದನ್ ಮೋಹನ್ ಅವರನ್ನು ವರ್ಗಾವಣೆ ಮಾಡುವಂತಹ ಪ್ರಯತ್ನಗಳು ಕೂಡಾ ನಡೆದಿದ್ದವು ಎಂದು ಹೇಳಲಾಗಿದೆ. ಅವರನ್ನು ಯಾವ ಸಂದರ್ಭದಲ್ಲೂ ವರ್ಗಾಯಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಇದ್ದವು. ಬಾಕ್ಸೈಟ್ ಲಾಬಿಗೆ ಸರ್ಕಾರ ಮಣಿದಿದೆಯೇ ಎಂದು ಶಂಕೆ ವ್ಯಕ್ತವಾಗಿದೆ.