ಮಂಗಳೂರು, ನ. 04 (DaijiworldNews/HR): ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿದ್ದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬರುವ ರಾಷ್ಟ್ರೀಯ ಜನತಾ ಪಕ್ಷದ ಮುಖಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರವಾಗಿ ಶಿರಾಟ್ ಘಾಟ್ ಮೂಲಕ ಆಗಮಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದ.ಕ. ಜಿಲ್ಲೆಗೆ ಆಗಮಿಸುವ ಬಿಜೆಪಿ ನಾಯಕರುಗಳು ಮತ್ತು ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರು ಸಕಲೇಶಪುರ ಮೂಲಕ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಮುಖಾಂತರ ಆಗಮಿಸಬೇಕು ಹಾಗೂ ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ರೋಡ್ ಚಾಲೆಂಜ್ ಚಿನ್ನದ ರಸ್ತೆ ಎಂಬ ಮಂಗಳೂರಿನಲ್ಲಿ ಟ್ರೆಂಡಿಂಗ್ ಆಗಿರುವ ಹ್ಯಾಶ್ ಟ್ಯಾಗ್ ನಲ್ಲಿ ಭಾಗಿಯಾಗುವಂತೆ ಹೇಳಿದ್ದಾರೆ.
ಇನ್ನು ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದ್ದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ 'ರೋಡ್ ಚಾಲೆಂಜ್' ಎಂಬ ಹ್ಯಾಶ್ ಟ್ಯಾಗ್ ಪ್ರಾರಂಭವಾಗಿದ್ದು, ಈ ಹಿನ್ನಲೆಯಲ್ಲಿ ಮಿಥುನ್ ರೈಯವರು ಈ ಹೇಳಿಕೆಯನ್ನು ನೀಡಿದ್ದಾರೆ.