ಮಂಗಳೂರು, ನ. 06 (DaijiworldNews/MB) : ''ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಹೊಸ ಶಿಕ್ಷಣ ನೀತಿ, ಮೂರು ಕೃಷಿ ಕಾಯ್ದೆಗಳು, ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ಹಾಗೂ ರಾಜ್ಯದಲ್ಲಿನ ನೈಸರ್ಗಿಕ ವಿಕೋಪವನ್ನು ನಿಭಾಯಿಸಲು ಕೈಗೊಂಡ ಕ್ರಮಗಳನ್ನು ಚರ್ಚಿಸಲಾಗಿದ್ದು ಪ್ರಮುಖ ನಿರ್ಣಯಗಳು ಅಂಗೀಕರಿಸಲಾಗಿದೆ'' ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.
ನವೆಂಬರ್ 5 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, "ಕಾರ್ಯಕಾರಿ ಸಭೆಯಲ್ಲಿ ಮುಂಬರುವ ಚುನವಾಣೆಗಾಗಿ ಕ್ಷದ ಕಾರ್ಯತಂತ್ರವನ್ನು ಬಲಪಡಿಸುವ ಅಗತ್ಯತೆ ಬಗ್ಗೆ ಸಂಘಟನಾ ಕಾರ್ಯದರ್ಶಿ ಅರುಣ್ ಜಿ ಅವರು ತಿಳಿಸಿದರು'' ಎಂದು ಹೇಳಿದ ಗಣೇಶ್ ಕಾರ್ಣಿಕ್ ಅವರು, ''ಗ್ರಾಮ ಪಂಚಾಯಿತಿ ಚುನಾವಣೆಗೆ ಮುನ್ನ ಪ್ರತಿ ಬೂತ್ನಲ್ಲಿ ಪಕ್ಷವನ್ನು ಬಲಪಡಿಸಬೇಕಾಗಿದೆ'' ಎಂದೂ ಕರೆ ನೀಡಿದರು.
"ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಕುಟುಂಬ ಕಲ್ಯಾಣ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದಲ್ಲಿ ಈ ಕಾರ್ಯಕ್ರಮವನ್ನು ಈಗಾಗಲೇ ಜಾರಿಗೆ ತರಲಾಗಿದ್ದು, ಗ್ರಾಮ ಪಂಚಾಯಿತಿ ಚುನಾವಣೆಗೆ ಮುನ್ನ ಇದು ಒಂದು ಪ್ರಮುಖ ಕಾರ್ಯಕ್ರಮವಾಗಲಿದೆ'' ಎಂದು ಹೇಳಿದರು.
''ಮುಂದಿನ ಕಾರ್ಯಕಾರಿ ಸಭೆ ಡಿಸೆಂಬರ್ 5 ರಂದು ಬೆಳಗಾವಿಯಲ್ಲಿ ನಡೆಯಲಿದೆ'' ಎಂದು ಕೂಡಾ ಇದೇ ವೇಳೆ ಮಾಹಿತಿ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಮಾಧ್ಯಮ ನಿರ್ವಾಹಕ ಕರುಣಾಕರ್ ಉಪಸ್ಥಿತರಿದ್ದರು.