ಮಂಗಳೂರು, ನ.06 (DaijiworldNews/PY): ಭಾರತ ಸರಕಾರದ ಮಾಜಿ ರಕ್ಷಣಾ, ರೈಲ್ವೆ ಹಾಗೂ ಕಾರ್ಮಿಕ ಸಚಿವ ದಿ.ಜಾರ್ಜ್ ಫೆರ್ನಾಂಡಿಸ್ ಅವರ ಅಭಿಮಾನಿ ಬಳಗ, ಕರಂಬಾರು ಇವರು ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣದ ಉದ್ಘಾಟನಾ ಸಮಾರಂಭ ನ.8ರ ಭಾನುವಾರದಂದು ಕರಂಬಾರು ಶಾಲೆ ಬಸ್ಸು ತಂಗುದಾಣದಲ್ಲಿ ನಡೆಯಲಿದೆ.
ಬಸ್ಸು ತಂಗುದಾಣದ ಉದ್ಘಾಟನೆಯನ್ನು ಮಾಜಿ ಶಾಸಕ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾರ್ಮಿಕ ನಾಯಕ, ದಿ.ಜಾರ್ಜ್ ಫೆರ್ನಾಂಡಿಸ್ ಅವರ ಸಹೋದರ ಮೈಕಲ್ ಬಿ.ಫೆರ್ನಾಡಿಸ್ ಅವರು ನೆರವೇರಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಮೂಲ್ಕಿ-ಮೂಡುಬಿದಿರೆಯ ಮಾಜಿ ಶಾಸಕ ಕೆ.ಅಭಯಚಂದ್ರ ಜೈನ್ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಸುಪ್ರಿತಾ ಆರ್.ಶೆಟ್ಟಿ ಭಾಗವಹಿಸಲಿದ್ದಾರೆ.