ಕಾಸರಗೋಡು, ನ. 14 (DaijiworldNews/MB) : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವರ್ಕಾಡಿ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ವರ್ಕಾಡಿ ಪಾತೂರು ದೇವಿಗದ್ದೆಯ ರಾಮಣ್ಣ (65)ಮೃತಪಟ್ಟವರು.
ಕಡಂಬಾರ್ನಲ್ಲಿ ಬೈಕ್ ಸ್ಕಿಡ್ ಆಗಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.