ಕಾಸರಗೋಡು, ನ. 26 (DaijiworldNews/SM): ಬೈಕ್ ಹಾಗೂ ಆಟೋರಿಕ್ಷಾ ನಡುವೆ ಉಂಟಾದ ಅಪಘಾತವೊಂದರಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಜಾರ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚೆರ್ಕಳ ಮಾಸ್ತಿಕುಂಡು ಪೊವ್ವಲ್ ನಿವಾಸಿ ಮಸೂದು(25) ಎಂದು ಗುರುತಿಸಲಾಗಿದೆ. ಜೊತೆಗಿದ್ದ ಸಂದೀಪ್ ಉನ್ನಿ(24) ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ 6.45ರ ಸುಮಾರಿಗೆ ಅಪಘಾತ ನಡೆದಿದೆ. ಮೃತದೇಹ ದಿಂದ ಲಭಿಸಿದ ಗುರುತು ಚೀಟಿ ಹಾಗೂ ಬೈಕ್ ನ ನಂಬರ್ ಸಹಾಯದಿಂದ ಮೃತ ಪಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.