ಮಂಗಳೂರು, ಡಿ.10 (DaijiworldNews/HR): ವಿರೋಧ ಪಕ್ಷಗಳ ಪ್ರತಿರೋಧದ ನಡುವೆಯೂ ಇಂದು ವಿಧಾನಸಭೆ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದ್ದಾರೆ.
ಸಾಂಧರ್ಭಿಕ ಚಿತ್ರ
ಗೋ ಹತ್ಯೆ ನಿಷೇಧ ಮಸೂದೆ ಮಂಡನೆಗೆ ಮುಂದಾದ ಸರ್ಕಾರದ ನಡೆಗೆ ವಿರೋಧ ಪಕ್ಷಗಳು ತೀವ್ರ ಅಸಮಾಧಾನ ಹೊರಹಾಕಿದರು. ಗೋ ಹತ್ಯೆ ನಿಷೇಧ ಮಸೂದೆ ಬಗ್ಗೆ ವಿಪಕ್ಷ ಸದಸ್ಯರ ಚರ್ಚೆಯಿಲ್ಲದೆ ಬರೀ ಆಡಳಿತ ಪಕ್ಷದ ಸದಸ್ಯರು ಮಾತ್ರ ಚರ್ಚೆ ಮಾಡಿ ವಿಧೇಯಕ ಅಂಗೀಕಾರಗೊಂಡಿತು.
ಈ ಕುರಿತು ದೈಜಿವಲ್ಡ್ ಜೊತೆ ಮಾನಾಡಿದ ಟೀಂ ಚೌಕಿದಾರ್ ಇದರ ಸದಸ್ಯ ಮಹೇಶ್ ತುಪ್ಪೆಕಲ್ಲು, ಗೋ ಹತ್ಯೆ ನಿಷೇಧ ಮಸೂದೆ ಮಂಡನೆ ಭಾರತದ ಪಾಲಿಗೆ ಬಹಳ ಸಂತೋಷದ ದಿನವಾಗಿದೆ. ಕರ್ನಾಟಕದಲ್ಲಿ ಗೋ ಹತ್ಯೆ ಸಾಗಾಟ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣ ಹತ್ಯೆ ನಿಷೇಧ ತಪ್ಪಿತಸ್ಥರಿಗೆ 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಪ್ರತಿ ಗೋ ಹತ್ಯೆಗೆ 50,000 ದಿಂದ ಗರಿಷ್ಠ ಐದು ಲಕ್ಷ ರೂ.ವರೆಗೆ ದಂಡ. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ ಗೋ ಹತ್ಯೆ ಉದ್ದೇಶಕ್ಕಾಗಿ ಅಂತರಾಜ್ಯ ಹಾಗೂ ರಾಜ್ಯದೊಳಗಡೆ ಗೋ ಸಾಗಾಟ ನಿಷೇಧ ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋ ಸಾಗಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಾಗಾಟ ಮಾಡಬೇಕು.
ಈ ನಿಯಮ ಉಲ್ಲಂಘನೆ ಮಾಡಿದರೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಐವತ್ತು ರೂ. ಸಾವಿರ ದಂಡ. ಎಸ್ ಐ ಶ್ರೇಣಿ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ತಪಾಸಣೆ ಹಾಗೂ ಮುಟ್ಟುಗೋಲು ಮಾಡಲು ಕಾಯ್ದೆಯಲ್ಲಿ ಅಧಿಕಾರ ನೀಡಿದ್ದು, ಮುಟ್ಟುಗೋಲು ಹಾಕಿದ ಕೂಡಲೇ ಸಂಬಂಧಿತ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗೆ ವರದಿ ಮಾಡಬೇಕು.
ಇನ್ನು ಗೋ ಹತ್ಯೆಗೆ ಸಂಬಂಧಿಸಿದಂತೆ ಸಾಗಾಟ ಮಾಡಿದ ವಾಹನಗಳು ಹಾಗೂ ಇತರ ಸಲಕರಣೆಗಳನ್ನು ಆರೋಪಿಗೆ ಹಿಂದುರಿಗಿಸಲು ಬ್ಯಾಂಕ್ ಗ್ಯಾರಂಟಿ ನೀಡಬೇಕು ಮತ್ತು ಗೋಹತ್ಯೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚನೆಗೆ ಅಧಿಕಾರ ನೀಡುದ್ದು, ಸಂಶೋಧನಾ ಉದ್ದೇಶಕ್ಕಾಗಿ ಬಳಸುವ ಗೋವುಗಳಿಗೆ ವಿನಾಯಿತಿ ನೀಡಲಾಗಿದೆ. ಪಶು ವೈದ್ಯಾಧಿಕಾರಿ ದೃಢೀಕರಿಸಿದ ಗೋ ಹತ್ಯೆ ಮಾಡಲು ಅವಕಾಶ ಮತ್ತು ಯಾವುದೇ ರೋಗಗಳಿಂದ ಬಳಲುತ್ತಿರುವ ಗೋವುಳ ಹತ್ಯೆಗೆ ಅವಕಾಶವನ್ನು ನೀಡಲಾಗಿದೆ.