ಮಂಗಳೂರು, ಡಿ.10 (DaijiworldNews/HR): ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲ ಸಿಲಿಂಡರ್ ಸಾಗಾಟ ನಡೆಸುತ್ತಿದ್ದ ಸಂದರ್ಭ ಒಂದು ಸಿಲಿಂಡರ್ನಲ್ಲಿ ಅನಿಲ ಸೋರಿಕೆ ಉಂಟಾದ ಘಟನೆ ರಾ.ಹೆ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ್ದು, ಚಾಲಕನ ಮುಂಜಾಗ್ರತೆಯಿಂದಾಗಿ ಅನಾಹುತ ತಪ್ಪಿದೆ.
ಅಡುಗೆ ಅನಿಲದ ಲೋಡಿನಲ್ಲಿ ಒಂದು ಸಿಲಿಂಡರ್ನಲ್ಲಿ ಸೋರಿಕೆ ಉಂಟಾಗಿತ್ತು. ಇದು ಚಾಲಕನ ಗಮನಕ್ಕೆ ಬಂದಿದ್ದು ಕೂಡಲೇ ಲಾರಿಯನ್ನು ಹೆದ್ದಾರಿ ಬಳಿ ನಿಲ್ಲಿಸಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ವಾಹನ ಸಂಚಾರವನ್ನು ಕೆಲ ಗಂಟೆಯ ಕಾಲ ತಡೆಹಿಡಿದಿದದು, ಇದರಿಂದ ತೊಕ್ಕೊಟ್ಟು ಜಂಕ್ಷನ್ ಕೆಲ ಕ್ಷಣ ಸ್ತಬ್ಧವಾಗಿತ್ತು.
ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಸಿಲಿಂಡರನ್ನು ದೂರದಲ್ಲಿ ಇಟ್ಟು ಅನಿಲ ಸೋರಿಕೆಯನ್ನು ತಡೆಹಿಡಿದಿದ್ದಾರೆ.