ಬೆಳ್ತಂಗಡಿ, ಡಿ.15 (DaijiworldNews/MB) : ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ಮಹಿಳೆಯರೂ ವಶಕ್ಕೆ ಸೋಮವಾರ ಪಡೆಯಲಾಗಿದೆ.
ರಾಮಚಂದ್ರ, ಜನಾರ್ದನ ಇಳಂತಿಲ, ಜನಾರ್ದನ ಪೂಜಾರಿ
ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ (40) ಮತ್ತು ರಾಮಚಂದ್ರ ದೇವಾಡಿಗ (45) ಎಂಬವರೆಂದು ಗುರುತಿಸಲಾಗಿದೆ. ವೈಶ್ಯಾವಾಟಿಕೆಯಲ್ಲಿ ನೊಂದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಇನ್ನು ಬಂಧಿತ ಆರೋಪಿಗಳಲ್ಲಿ ರಾಮಚಂದ್ರ ದೇವಾಡಿಗ ತನ್ನ ಮನೆಯನ್ನೇ ಕೃತ್ಯಕ್ಕೆ ಅವಕಾಶ ನೀಡಿದ್ದಾಗಿ ತಿಳಿದು ಬಂದಿದ್ದು, ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 3, 4,5 (ಡಿ) ಐ.ಟಿ.ಪಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.