ಮಂಗಳೂರು, ಡಿ.16 (DaijiworldNews/PY): ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆ ಡಿ.16ರ ಬುಧವಾರದಂದು ನಡೆದಿದೆ.
ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ.
ಬಂದರು ಠಾಣೆಯ ಹೆಡ್ ಕಾನ್ಸ್ಟೇಬಲ್ ಗಣೇಶ್ ಕಾಮತ್ ಹಾಗೂ ಇಬ್ಬರು ಸಿಬ್ಬಂದಿ ತಪಾಸಣೆ ನಿರತರಾಗಿದ್ದರು. ಈ ಸಂದರ್ಭ ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ.
ಗಣೇಶ್ ಕಾಮತ್ ಅವರ ಕೈಗೆ ತಲವಾರಿನಿಂದ ಏಟು ಬಿದ್ದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯಾವುದೋ ದ್ವೇಷದ ಹಿನ್ನೆಲೆ ಈ ಹಲ್ಲೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದು, ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆ ಇದೆ.