ಪುತ್ತೂರು,ಜ.01 (DaijiworldNews/HR): ಸ. ಮಾ. ಉ. ಹಿ. ಪ್ರಾ. ಶಾಲೆ ಹಾರಾಡಿಯಲ್ಲಿ ವಿದ್ಯಾಗಮ ಆರಂಭೋತ್ಸವವನ್ನು ನಗರ ಸಭಾ ಸದಸ್ಯೆ ಪ್ರೇಮಲತಾ ಜಿ ಅವರು ಮಕ್ಕಳ ಕೈಗೆ ಸ್ಯಾನಿಟೈಜರ್ ಹಾಕಿ ಶುಭಹಾರೈಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ಕೃಷ್ಣ ನಾಯ್ಕ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಿಯಾ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ರಾಜೇಶ್ವರಿ ವಂದಿಸಿದರು.
ಇನ್ನು ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.