ಮಂಗಳೂರು, ಜ.03 (DaijiworldNews/PY): ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹಗಳನ್ನೊಳಗೊಂಡ ಪತ್ರ, ನೋಟಿನ ನಕಲು ಪ್ರತಿಗಳು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಗಳಲ್ಲಿ ಪತ್ತೆಯಾಗಿವೆ.
ಸಾಂದರ್ಭಿಕ ಚಿತ್ರ
ಅತ್ತಾವರ ಬಾಬುಗುಡ್ಡೆ ಶೆಟ್ಲೆ ಗ್ರಾಮದ ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಅದರ ಸಮೀಪದಲ್ಲಿರುವ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ಹಾಗೂ ಕೊಟ್ಟಾರದ ಕಲ್ಲುರ್ಟಿ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಪತ್ರ, ನೋಟಿನ ನಕಲು ಪ್ರತಿಗಳು ಕಂಡುಬಂದಿವೆ.
ದುಷ್ಕರ್ಮಿಗಳು ನಡೆಸಿದ ಈ ಕೃತ್ಯ ಜ.2ರ ಶನಿವಾರದಂದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.