Karavali
ಉಡುಪಿ: ಜಿಲ್ಲಾ ಪೊಲೀಸರ ಕಾರ್ಯಕ್ಷಮತೆಗೆ ಐ.ಜಿ.ಪಿ. ಪಶ್ಚಿಮ ವಲಯದಿಂದ ಶ್ಲಾಘನೆ, ಬಹುಮಾನ ಘೋಷಣೆ
- Sat, Jan 09 2021 03:42:23 PM
-
ಉಡುಪಿ, ಜ.09 (DaijiworldNews/PY): ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ಅವರು ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನವನ್ನು ಘೋಷಣೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರಅತ್ಯುತ್ತಮ ಕೆಲಸ ನಿರ್ವಹಿಸಿ, ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರ ಪಡೆದುಕೊಂಡವರ ವಿವರ ಈ ಕೆಳಗಿನಂತಿವೆ:
ಈ ಹಿಂದೆ ಸೆನ್ ಅಪರಾಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೀತಾರಾಮ ಪಿ, ಹಾಗೂ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್.ಐ. ನಾರಾಯಣ, ಪಿಎಸ್.ಐ. ಲಕ್ಷ್ಮಣ ಹಾಗೂ ಸಿಬ್ಬಂದಿ ಶ್ರೀಧರ್, ರಾಘವೇಂದ್ರ, ಕೃಷ್ಣಪ್ರಸಾದ್, ಜೀವನ್ ಹಾಗೂ ಪ್ರವೀಣ್ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದ ಕೋಟೇಶ್ವರದ ನಿವಾಸಿ ಹರೀಶ್ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ರಾಜನ ಬಗ್ಗೆ ಹಾಗೂ ಮುಸ್ಲಿಂ ಧರ್ಮದ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸರಿಸಿ, ಸೌದಿ ಅರೇಬಿಯಾದಲ್ಲಿ ಹರೀಶ್ ಬಂಗೇರ ಅವರ ಬಂಧನಕ್ಕೆ ಕಾರಣರಾದವರ ವಿರುದ್ಧ ಉಡುಪಿ ಜಿಲ್ಲೆಯ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡು, ಸಮರ್ಪಕವಾಗಿ ತನಿಖೆ ನಡೆಸಿ, ಇಬ್ಬರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ.
2020ರ ಸೆಪ್ಟೆಂಬರ್ 24ರಂದು ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದ ಬಗಳಿ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಆರೋಪಿತರಾದ 9 ಜನರನ್ನು ಶೀಘ್ರವಾಗಿ ಬಂಧಿಸಿದ ತಂಡದಲ್ಲಿ ಬ್ರಹ್ಮಾವರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಆಗಿನ ಕಾಪು ವೃತ್ತ ನಿರೀಕ್ಷ ಮಹೇಶ್ ಪ್ರಸಾದ್, ಉಡುಪಿ ವೃತ್ತದ ವೃತ್ತ ನಿರೀಕ್ಷ ಮಂಜುನಾಥ, ಡಿಸಿಐಬಿ, ಉಡುಪಿ ಇದರ ನಿರೀಕ್ಷಕ ಮಂಜಪ್ಪ ಡಿ.ಆರ್, ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ, ಆಗಿನ ಬ್ರಹ್ಮಾವರ ಠಾಣೆಯ ಪಿ.ಎಸ್.ಐ. ಆದ ರಾಘವೇಂದ್ರ ಸಿ., ಕೋಟ ಠಾಣೆಯ ಪಿ.ಎಸ್.ಐ. ಸಂತೋಷ್ ಬಿ.ಪಿ., ಎ.ಎಸ್.ಐ. ಕೃಷ್ಣಪ್ಪ, ಡಿಸಿಐಬಿಯ ಎ.ಎಸ್.ಐ. ರವಿಚಂದ್ರ, ಹಾಗೂ ಡಿಸಿಐಬಿಯ ಸಿಬ್ಬಂದಿಯವರಾದ ರಾಮು ಹೆಗ್ಡೆ, ರಾಘವೆಂದ್ರ, ಬ್ರಹ್ಮಾವರ ವೃತ್ತ ಕಛೇರಿಯ ಸಿಬ್ಬಂದಿಗಳಾದ ವಾಸುದೇವ, ಗಣೇಶ್, ಪ್ರದೀಪ್ ನಾಯಕ್ ಹಾಗೂ ಚಾಲಕ ಶೇಖರ, ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳಾದ ದಿಲೀಪ್, ಅಣ್ಣಪ್ಪ ಮೊಗವೀರ ಮತ್ತು ರವೀಂದ್ರ, ಹಿರಿಯಡ್ಕ ಠಾಣೆಯ ಸಿಬ್ಬಂದಿ ಇಂದ್ರೇಶ್.
ಇತ್ತೀಚೆಗೆ ಭಾರೀ ಸಂಚಲನ ಮೂಡಿಸಿದ್ದ, ಮಣಿಪಾಲ ಠಾಣೆಯಲ್ಲಿ ದಾಖಲಾದ ಮಾದಕ ದ್ರವ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಅತ್ಯಂತ ಚಾಣಾಕ್ಷತನದಿಂದ ಆರೋಪಿಗಳನ್ನು ಪತ್ತೆ ಹಚ್ಚಿ, ದಸ್ತಗಿರಿಗೊಳಿಸಿ, ಅಪಾರ ಪ್ರಮಾಣದ ಭಾರೀ ಮೌಲ್ಯದ ಮಾದಕ ದ್ರವ್ಯ ಪದಾರ್ಥಗಳನ್ನು ವಶಪಡಿಸಿಕೊಂಡ ತಂಡದ ನೇತೃತ್ವ ವಹಿಸಿದ ಅಧಿಕಾರಿಗಳಾದ ಮಂಜುನಾಥ ಎಂ., ಪೊಲೀಸ್ ನಿರೀಕ್ಷಕರು, ಮಣಿಪಾಲ ಠಾಣೆ ಹಾಗೂ ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ ಅವರು ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
2019 ಮತ್ತು ಅದಕ್ಕೂ ಹಿಂದೆ ವರದಿಯಾಗಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ತನಿಖೆಯಲ್ಲಿರುವ ಪ್ರಕರಣಗಳ ಸಂಖ್ಯೆಯನ್ನು ಇಳಿಮುಖ ಮಾಡುವಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸಿದ ಮಂಜುನಾಥ ಎಂ., ಪೊಲೀಸ್ ನಿರೀಕ್ಷಕರು, ಮಣಿಪಾಲ ಠಾಣೆ ಹಾಗೂ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ, ಮಣಿಪಾಲ ಠಾಣೆ, ರಾಜಶೇಖರ ಬಿ. ಸಾಗನೂರು, ಕಾಪು ಠಾಣೆ, ಕುಮಾರಿ ಸಂಗೀತ, ಬೈಂದೂರು ಠಾಣೆ, ಸಂತೋಷ್ ಬಿ.ಪಿ, ಕೋಟ ಠಾಣೆ, ಸಕ್ತಿವೇಲು, ಉಡುಪಿ ನಗರ ಠಾಣೆ, ಎ.ಎಸ್.ಐ. ದಿವಾಕರ ಶರ್ಮ, ಮಣಿಪಾಲ ಠಾಣೆ, ಮಂಜುನಾಥ, ಬೈಂದೂರು ಠಾಣೆ, ಸಿಬ್ಬಂದಿಯವರಾದ ಉಡುಪಿ ನಗರ ಠಾಣೆಯ ರಿಯಾಜ್ ಅಹ್ಮದ್ ಮತ್ತು ವಿಶ್ವನಾಥ, ಬೈಂದೂರು ಠಾಣೆಯ ನಾಗರಾಜ್, ಕೋಟಾ ಠಾಣೆಯ ಗಣೇಶ್ ಮತ್ತು ಕೃಷ್ಣ, ಮಣಿಪಾಲ ಠಾಣೆಯ ಆದರ್ಶ ಹಾಗೂ ಕಾಪು ಠಾಣೆಯ ಮಹಾಬಲ ಶೆಟ್ಟಿಗಾರ್ ಮತ್ತು ಅರುಣ್ ಕುಮಾರ್ರವರು ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
2020ನೇ ಸಾಲಿನಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ 67 ಪ್ರಕರಣಗಳನ್ನು ಇತ್ಯರ್ಥಪಡಿಸಿ, ನ್ಯಾಯಾಂಗ ವಿಚಾರಣೆಯ ಪ್ರಕರಣಗಳ ಸಂಖ್ಯೆಯನ್ನು ಇಳಿಮುಖ ಮಾಡುವಲ್ಲಿ ಮಹತ್ತರ ಪಾತ್ರ ವಹಿಸಿದ ತಂಡದಲ್ಲಿ ಪಿ.ಎಸ್.ಐ.ಗಳಾದ ಕುಮಾರಿ ಸಂಗೀತ, ಬೈಂದೂರು ಠಾಣೆ, ಶ್ರೀಧರ ನಾಯ್ಕ, ಶಂಕರನಾರಾಯಣ ಠಾಣೆ, ದಿಲೀಪ್, ಪಡುಬಿದ್ರಿ ಠಾಣೆ, ಸದಾಶಿವ ಗವರೋಜಿ, ಕುಂದಾಪುರ ಠಾಣೆ, ರಾಘವೇಂದ್ರ, ಬ್ರಹ್ಮಾವರ ಠಾಣೆ (ಪ್ರಸ್ತುತ ಕಾಪು ಠಾಣೆ) ಹಾಗೂ ಅಬ್ದುಲ್ ಖಾದರ್, ಉಡುಪಿ ಸಂಚಾರ ಠಾಣೆ.
ಜನಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕಹೊಂದಿ, ಅಲ್ಲಿನ ಆಗುಹೋಗುಗಳ ಬಗ್ಗೆ ಗಮನಹರಿಸಿ, ಬೀಟ್ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಸಿಬ್ಬಂದಿಯವರಾದ ಕೊಲ್ಲೂರು ಠಾಣೆಯ ನವೀನ್ ದೇವಾಡಿ, ಮಲ್ಪೆಯ ರವಿರಾಜ್, ಪಡುಬಿದ್ರೆಯ ಬಸಪ್ಪ, ಶಿರ್ವಾದ ಅಂದಪ್ಪ ಹಾಗೂ ಕುಂದಾಪುರ ಠಾಣೆಯ ಪ್ರಸನ್ನ ಅವರು ಈ ಪುರಸ್ಕಾರಕ್ಕೆ ಭಾಜನರಾದ್ದಾರೆ.
ಪ್ರಶಸ್ತಿ ಗಳಿಸಿದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್. ವಿಷ್ಣುವರ್ಧನ ಐ.ಪಿ.ಎಸ್. ಹಾಗೂ ಕುಮಾರಚಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ, ಉಡುಪಿರವರು ಶ್ಲಾಘಿಸಿದ್ದಾರೆ. ಅಲ್ಲದೇ ಪ್ರಂಶಸನಾ ಪತ್ರ ಹಾಗೂ ನಗದು ಪುರಸ್ಕಾರ ಘೋಷಿಸಿದ ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರುವರಿಗೆ ಪೊಲೀಸ್ ವರಿಷ್ಟಾಧಿಕಾರಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಇದೇ ವೇಳೆ ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರ ಪಡೆದುಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಇದೇ ರೀತಿ ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಂಡು, ಇನ್ನೂ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಲು ಕಿವಿಮಾತು ಹೇಳಿದರು. ಹಾಗೂ ಜಿಲ್ಲೆಯ ಇತರ ಅಧಿಕಾರಿ, ಸಿಬ್ಬಂದಿಗಳು ಸಹ ಇದೇ ರೀತಿ ತಮ್ಮ ಕಾರ್ಯದಕ್ಷತೆಯನ್ನು ನಿರ್ವಹಿಸಿ, ಮೇಲಾಧಿಕಾರಿಯವರಿಂದ ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರ ಪಡೆಯುವಂತಾಗಲಿ ಎಂದು ಹಾರೈಸಿದರು.