ಉಪ್ಪಿನಂಗಡಿ, ಜ.27 (DaijiworldNews/PY): ಬೈಕ್ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಜ.26ರ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಹಳೆನೇರಂಕಿ ಗ್ರಾಮದ ಕಲ್ಲೇರಿ ದಿ.ವೆಂಕಟೇಶ್ ಹಾಗೂ ರತ್ನ ದಂಪತಿಗಳ ಪುತ್ರ ಕಿಶೋರ್ (29) ಎಂದು ಗುರುತಿಸಲಾಗಿದೆ.
ಕಿಶೋರ್ ಮಂಗಳೂರಿನ ತೊಕ್ಕೊಟ್ಟಿನಲ್ಲಿರುವ ಪ್ರಿಂಟಿಂಗ್ ಪ್ರೆಸ್ವೊಂದರಲ್ಲಿ ಉದ್ಯೋಗಿಯಾಗಿದ್ದರು. ಜ.26ರಂದು ರಾತ್ರಿ ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಕಿಶೋರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ರಿಕ್ಷಾ ಚಾಲಕ ಹಾಗೈ ಇನ್ನಿಬ್ಬರು ಪುತ್ತೂರಿನ ಸಿಟಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯನ್ನು ಅಗಲಿದ್ದಾರೆ.
ಮೃತ ಕಿಶೋರ್ ಅವರಿಗೆ ಮೂರು ವಾರಗಳ ಹಿಂದೆ ವಿವಾಹವಾಗಿತ್ತು. ನಂತರ ಅವರು ಪ್ರತಿದಿನ ರಾತ್ರಿ ಮನೆಗೆ ಬಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದರು.