ಉಡುಪಿ, ಫೆ.07 (DaijiworldNews/PY): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ನುಗ್ಗಿದ ಘಟನೆ ಫೆ.6ರ ಶನಿವಾರದಂದು ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಹಾಗೂ ಕೂಲಿ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.
ಕಾರು ಚಾಲಕ ಹರೀಶ್ ಶೆಟ್ಟಿ ಅವರು ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದರು. ಭಜನೆಕಟ್ಟೆ ಸಮೀಪಿಸುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ಪುತ್ತು ನಾಯಕ್ ಅವರ ಮನೆಗೆ ಡಿಕ್ಕಿ ಹೊಡೆದು, ಮಗುಚಿ ಬಿದ್ದಿದೆ. ಪರಿಣಾಮ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರು ಚಾಲಕ ಹರೀಶ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂದರ್ಭ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡಿದ್ದಾನೆ.