ಮಂಗಳೂರು, ಫೆ.08 (DaijiworldNews/MB) : ಆರು ಅಪರಿಚಿತ ದುಷ್ಕರ್ಮಿಗಳ ಗುಂಪು ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆ ಫೆಬ್ರವರಿ 7 ರ ಭಾನುವಾರ ರಾತ್ರಿ 9: 45 ಕ್ಕೆ ಲಾಲ್ಬಾಗ್ನ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಬಳಿ ನಡೆದಿದೆ.
ಗಾಯಾಳುವನ್ನು ದೀಪಕ್ ಎಂದು ಗುರುತಿಸಲಾಗಿದೆ.
ದೀಪಕ್ ಪ್ರಕಾರ, ಆರೋಪಿಗಳು ಎರಡು ಬೈಕ್ಗಳಲ್ಲಿ ಬಂದಿದ್ದು ದೀಪಕ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ದೀಪಕ್ ಅವರ ಎಡಗೈ ಮೇಲೆ ಗಾಯವಾಗಿದೆ.
ದೀಪಕ್ ಅವರ ದ್ವಿಚಕ್ರ ವಾಹನದಲ್ಲಿ ಶಿವಾಜಿ ಸ್ಟಿಕ್ಕರ್ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ದೀಪಕ್ ಹಿಂದೂ ಕಾರ್ಯಕರ್ತ ಎಂದು ತಿಳಿದ ನಂತರ ದೀಪಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಗಾಯಗೊಂಡ ದೀಪಕ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಪರಾಧಿಗಳನ್ನು ಶೀಘ್ರದಲ್ಲಿಯೇ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದರು.
ಈ ಘಟನೆ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.