ಮಂಗಳೂರು, ಫೆ.08 (DaijiworldNews/MB) : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಲಸಿಕೆ ನೀಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಈ ವೇಳೆಯೇ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್, ಐಎಎಸ್ ಅಧಿಕಾರಿ ಮೋನಾ ರಾವತ್, ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರಿಗೂ ಲಸಿಕೆ ನೀಡಲಾಗಿದೆ.
ಇದೇ ಸಂದರ್ಭದಲ್ಲೇ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಯವರೇ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ಡಿಸಿಪಿಗಳಿಗೆ ರಕ್ಷದೊತ್ತಡ ತಪಾಸಣೆ ನಡೆಸಿದರು.
ಇನ್ನು, ''ಸೋಮವಾರ ಜಿಲ್ಲೆಯ 41 ಕಡೆ 6,054 ಜನರಿಗೆ ಕೊರೊನಾ ಲಸಿಕೆ ನೀಡುವ ಗುರಿಯಿದೆ'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.