ಪುತ್ತೂರು, ಫೆ.08 (DaijiworldNews/MB) : ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೊಟ್ಟೆತ್ತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮೃತ ಸವಾರನನ್ನು ಸಾಮೆತ್ತಡ್ಕ ನಿವಾಸಿ, ಸಿಂಧೂ ಸಾಫ್ಟ್ ಡ್ರಿಕ್ಸ್ನ ಮಾಲಕ ಕರುಣಾಕರ್ ಅವರ ಪುತ್ರ ಪ್ರಸಾದ್ ಎಂದು ಗುರುತಿಸಲಾಗಿದೆ.
ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪಿಕಪ್ ಚರಂಡಿಗೆ ಇಳಿದಿತ್ತು ಎಂದು ವರದಿಯಾಗಿದೆ.
ಇನ್ನು ಕಳೆದ 36 ಗಂಟೆಗಳ ಅವಧಿಯಲ್ಲಿ ನಡೆದ 4 ದ್ವಿಚಕ್ರ ವಾಹನ ಅಪಘಾತದಲ್ಲಿ ನಾಲ್ವರು ಸವಾರರೂ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.