ಮೂಡುಬಿದಿರೆ, ಫೆ. 05 (DaijiworldNews/SM): ಕೋಟಿ ಚೆನ್ನಯ, ಬಿಲ್ಲವ ಸಮುದಾಯ ಮತ್ತು ಬಿಲ್ಲವ ನಾಯಕ ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜಗದೀಶ್ ಅಧಿಕಾರಿ ವಿರುದ್ಧ ಸೋಮವಾರ ಮೂಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಎಫ್ಐಆರ್ ದಾಖಲಿಸಲಾಗಿದೆ.
ಜಗದೀಶ್ ಅಧಿಕಾರಿ ವಿರುದ್ಧ ಐಪಿಸಿ 295(ಎ) ಮತ್ತು 505 ರ ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ.
ಕೋಟಿ ಚೆನ್ನಯ, ಬಿಲ್ಲವ ಸಮುದಾಯ ಮತ್ತು ಬಿಲ್ಲವ ನಾಯಕ ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅಧಿಕಾರಿ ವಿರುದ್ಧ ಬಿಲ್ಲವ ಸಮುದಾಯ ತಿರುಗಿಬಿದ್ದಿತ್ತು. ಜಗದೀಶ್ ಹೇಳಿಕೆ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ನಡುವೆ ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ರಾಜು ಪಿಕೆ ಮತ್ತು ಇತರ ಬಿಲ್ಲವ ಮುಖಂಡರು ಫೆಬ್ರವರಿ 5 ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಎಲ್ಲಾ ಬೆಳವಣಿಗೆ ನಡುವೆ ಮಾಜಿ ಕಾರ್ಪೋರೇಟರ್ ಮತ್ತು ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಅವರು ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಜಗದೀಶ್ ಅಧಿಕಾರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.