ಮಂಗಳೂರು, .28 (DaijiworldNews/HR): ಅಕ್ರಮ ಮರಳು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಗರ ಪೊಲೀಸ್ ಆಯುಕ್ತ ಮತ್ತು ಡಿಸಿಪಿ ಟಿಪ್ಪರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಟಿಪ್ಪರ್ ಚಾಲಕ ಸೂರಜ್, ಚಂದ್ರಹಾಸ, ರಾಕೇಶ್, ಸನಮ್ ಮತ್ತು ಟಿಪ್ಪರ್ ಮಾಲೀಕರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಎಸ್ಐ ಚಂದ್ರ ಅವರನ್ನು ತಳ್ಳಿ ಹಲ್ಲೆ ಮಾಡಿದ್ದಕ್ಕಾಗಿ ಸ್ಥಳದಿಂದ ತಪ್ಪಿಸಿಕೊಂಡ ಕೆ ಸಿ ರಸ್ತೆ ನಿವಾಸಿ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪೊಲೀಸರು ಕರ್ತವ್ಯ ನಿರ್ವಹಿಸುವುದನ್ನು ತಡೆದಿರುವುದಕ್ಕೆ ಪ್ರಕರಣ ದಾಖಲಿಸಲಾಗಿದೆ. ಈ ಆರೋಪಿಗಳು ಎರಡು ಕಾರುಗಳಲ್ಲಿ ಮರಳು ಟ್ರಕ್ಗೆ ಬೆಂಗಾವಲು ನೀಡುತ್ತಿದ್ದರು.
ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಅವರು ತಲಪ್ಪಾಡಿ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಸುತ್ತುತ್ತಿದ್ದರು. ಸೋಮೇಶ್ವರ ಕಡಲ ತೀರದಿಂದ ಕೇರಳಕ್ಕೆ ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಅನ್ನು ನೋಡಿದ ಅವರು ಕೆ.ಸಿ ರಸ್ತೆ ಬಳಿ ನಿಲ್ಲಿಸುವಂತೆ ಹೇಳಿದರು. ಆದರೆ, ಅವರು ಸಮವಸ್ತ್ರದಲ್ಲಿಲ್ಲದ ಕಾರಣ ಅದು ಕಮಿಷನರ್ ಮತ್ತು ಡಿಸಿಪಿ ಎಂದು ತಿಳಿಯದೆ, ಟಿಪ್ಪರ್ ಚಾಲಕ ನಿಲ್ಲದೆ ಪೊಲೀಸ್ ಅಧಿಕಾರಿಗಳ ಮುಂದೆಯೇ ಹೋಗಿದ್ದು, ಅಧಿಕಾರಿಗಳು ಅವರನ್ನು ಬೆನ್ನಟ್ಟಿ ಟೋಲ್ ಗೇಟ್ ಬಳಿ ನಿಲ್ಲಿಸಿದ್ದಾರೆ.
ಬಳಿಕ ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಕರೆದು ಎರಡು ಕಾರು ಮತ್ತು ಆರು ಬೈಕುಗಳನ್ನು ವಶಪಡಿಸಿಕೊಂಡು ಆರು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.