ಉಡುಪಿ, ಮಾ 09 (DaijiworldNews/MS): ಪುತ್ತೂರು ಬಳಿಯ ಅಧಿಕಾರಿಯೋರ್ವರ ಮನೆಯೊಂದಕ್ಕೆ ಎಸಿಬಿ ಅಧಿಕಾರಿಗಳು ಮಾ.೯ರ ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಕುರಿತು ಮಾಹಿತಿ ಲಭಿಸಿದೆ.
ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ವಡ್ಡಾರು ಅವರ ಮನೆಗೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಇವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರು ಆಗಿದ್ದರು.
ಉಡುಪಿಯ ಹೊರವಲಯದ ಪುತ್ತೂರು ಎಂಬಲ್ಲಿರುವ ಮನೆ ಮೇಲೆ ಮಂಗಳೂರು ವಿಭಾಗದ ಎಸಿಬಿ ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಯುತ್ತಿದೆ.
ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ ಹೊಂದಿದ್ದಾರೆ ಎನ್ನಲಾದ ಒಟ್ಟು ನಾಲ್ಕು ಕಡೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.