ಕಾರ್ಕಳ, ಮಾ10 (DaijiworldNews/MS): ಮನೆಯ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ವಜ್ರದಾಭರಣ ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ.
ಈ ಬಗ್ಗೆ ವಿವೇಕ್ (51) ಎಂಬವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, ಇವರ ಮನೆಯಲ್ಲಿ ಮಾ.7 ರ ಹಾಗೂ ಮಾ.9 ರ ನಡುವಿನ ದಿನಾಂಕದಲ್ಲಿ ಕಳ್ಳತನ ನಡೆದಿದೆ ಎಂದು ದೂರು ನೀಡಿದ್ದಾರೆ.
ಮನೆಯ ಮುಖ್ಯ ದ್ವಾರದ ಬಾಗಿಲನ್ನು ಕಳ್ಳರು ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿ ಮನೆಯ ಒಳಗಡೆ ಬೆಡ್ ರೂಂ ನಲ್ಲಿದ್ದ ಕಪಾಟಿನ ಬೀಗವನ್ನು ಮುರಿದು ಕಪಾಟಿನ ಒಳಗಡೆ ಇದ್ದ 7.80 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಬಂಗಾರದ ಚಿನ್ನಾಭರಣಗಳನ್ನು ಕಳವು ಮಾಡಿದ್ದು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.