ಮಂಗಳೂರು, ಮಾ.22 (DaijiworldNews/MB) : ಮಾರ್ಚ್ 22 ರ ಸೋಮವಾರ ಬೆಳಿಗ್ಗೆ ತಲಪಾಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
ಈ ಅಪಘಾತದಲ್ಲಿ ಗಾಯಗೊಂಡವರು ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ.
ತುಳಸಿ ತಲಪಾಡಿಯಲ್ಲಿ ಟೈರ್ ಅಂಗಡಿಯೊಂದನ್ನು ನಡೆಸುತ್ತಿದ್ದು ಸೋಮವಾರ ಅಂಗಡಿಗೆ ತೆರಳುತ್ತಿದ್ದನು. ಡಿವೈಡರ್ ಮಧ್ಯೆ ಸ್ಕೂಟರ್ ತಿರುಗಿಸುತ್ತಿದ್ದ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿ ಹೊಡೆದಿದೆ. ಈ ಬಸ್ ಮಂಗಳೂರಿನಿಂದ ಕಾಸರಗೋಡು ಕಡೆಗೆ ಚಲಿಸುತ್ತಿತ್ತು.
ಅಪಘಾತದ ರಭಸಕ್ಕೆ ಸ್ಕೂಟರ್ ಬಸ್ಸಿನಡಿಗೆ ಬಿದ್ದು ನಜ್ಜುಗೊಜ್ಜಾಗಿದೆ. ನಾಗೂರಿ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.