ಬೆಳ್ತಂಗಡಿ, ಮಾ.22 (DaijiworldNews/PY): ಮದ್ದಡ್ಕ ಸಮೀಪ ತನ್ನ ಸ್ವಂತ ಕಚೇರಿಯ ಉದ್ಘಾಟನೆಗೆಂದು ತೆರಳುತ್ತಿ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಸೋಮವಾರ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಮದ್ದ ನಿವಾಸಿ ಮಾಝಿನ್ (28) ಎಂದು ಗುರುತಿಸಲಾಗಿದೆ.
ಯವಕನನ್ನು ಕೂಡಲೇ ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಯುವಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮಾಝಿನ್ ಎಂಜಿನಿಯರ್ ಆಗಿದ್ದು, ಮದ್ದಡ್ಕದಲ್ಲಿ ಕಚೇರಿ ತೆರೆದಿದ್ದು, ಈ ಹಿನ್ನೆಲೆ ಸೋಮವಾರ ಕಚೇರಿಯ ಉದ್ಘಾಟನೆ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಮಾಲಾಡಿ ಬಳಿ ಅರ್ತಿಲ ತಿರುವಿನಲ್ಲಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದಿರುವ ಸಾಧ್ಯತೆ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.