ಪುತ್ತೂರು, ಮಾ.23 (DaijiworldNews/MB) : ಬೈಕ್ ಅಪಘಾತ ಸಂಭವಿಸಿ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿ, ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದ ಮಡಿಕೇರಿಯ ಸೋಮವಾರ ಪೇಟೆ ನಿವಾಸಿ ಚೇತನ್ (20) ಎಂದು ಗುರುತಿಸಲಾಗಿದೆ.
ಚೇತನ್ನ ಸ್ನೇಹಿತ ಸುಳ್ಯ ತಾಲೂಕಿನ ಬೆಳ್ಳಾರೆ ಪೆರುವಾಜೆ ಗ್ರಾಮದ ಗೊಂಡೆಪಾಡಿ ನಿವಾಸಿ ಸುದೀಪ್(20) ಗಂಭೀರವಾಗಿ ಗಾಯಗೊಂಡಾತ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.