ಮೂಡುಬಿದಿರೆ, ಮಾ. 24 (DaijiworldNews/HR): ಮಡಿಕೇರಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂಟಿ ಮಹಿಳೆ ಹತ್ಯೆ ಪ್ರಕರಣದ ಅರೋಪಿ, ಮೂಡುಬಿದಿರೆ ಯುವಕನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಹೊಸಬೆಟ್ಟು ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.
ಆರೋಪಿಯು ನಗರದ ಖಾಸಗಿ ರೆಸಾರ್ಟಿನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯ ತಂಡ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
70 ವರ್ಷದ ಒಂಟಿ ಮಹಿಳೆ ಲಲಿತಾ ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಲಾಗಿದ್ದು, ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರ್ಕರಣ ದಾಖಲಾಗಿತ್ತು.
ಇನ್ನು ಆರೋಪಿಯು ಮಕ್ಯಾನಿಕ್ ಇಂಜಿನಿಯರ್ ಆಗಿದ್ದು, ಈತ ಮೂಡುಬಿದಿರೆ ಹಾಗೂ ಮಂಗಳೂರಿನಲ್ಲಿ ಮಾರಾಟ ಮಾಡಿದ ಸುಮಾರು 2.80 ಲಕ್ಷ ಮೌಲ್ಯದ ಚಿನ್ನಾಭಾರಣ,ನಗದು, ಹಾಊ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.