ಕಾಸರಗೋಡು, ಮಾ.24 (DaijiworldNews/MB) : ಅಕ್ರಮವಾಗಿ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ 48 ಬಾಟಲ್ ಮದ್ಯವನ್ನು ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮದ್ಯ ಪತ್ತೆಯಾಗಿದ್ದು, ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ ಸೀಟಿನಡಿ ಬಾಕ್ಸ್ಗಳಲ್ಲಿ ಮದ್ಯ ಪತ್ತೆಯಾಗಿದೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯ್ಲಲಿ ತಪಾಸಣೆ ತೀವ್ರಗೊಳಿಸಲಾಗಿದೆ.