ಕಡಬ, ಮಾ. 24 (DaijiworldNews/SM): ಕಡಬ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಅರಣ್ಯಾಧಿಕಾರಿಗಳು ಮನೆಗೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊನೆಗೂ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಕಡಬ ಠಾಣಾ ವ್ಯಾಪ್ತಿಯ ಐತ್ತೂರಿನ ಪ್ರಸಾದ್ ಎಂಬವರ ಮನೆಗೆ ದಾಳಿ ಮಾಡಿದ್ದ ಅಧಿಕಾರಿಗಳು ದರ್ಪದ ವರ್ತನೆ ತೋರಿದ್ದರು. ಅಲ್ಲದೆ, ರಾತ್ರಿ ಮನೆಗೆ ನುಗ್ಗಿ ದೌರ್ಜನ್ಯ ಎಸಗಿದ್ದರು ಎನ್ನು ಆರೋಪ ವ್ಯಕ್ತವಾಗಿದೆ. ಅಲ್ಲದೆ, ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಆರೋಪ ವ್ಯಕ್ತವಾಗಿದೆ. ಉಪವಾಸ ಸತ್ಯಾಗ್ರಹ ಕೂಡ ನಡೆಸಲಾಗಿತ್ತು. ಅಲ್ಲದೆ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಪ್ರಕರಣ ದಾಖಲಿಸಲು ಕಡಬ ಠಾಣಾ ಪೊಲೀಸರು ಹಿಂದೇಟು ಹಾಕಿದ್ದರು.
ಈ ನಡುವೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. 6 ದಿನಗಳು ಸತ್ಯಾಗ್ರಹ ನಡೆದರೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡದೇ ಅಸಡ್ಡೆ ತೋರಿದ್ದರು. ನೀತಿ ಸಾಮಾಜಿಕ ಸಂಘಟನೆ, ಪ್ರಸಾದ್ ಮನೆಯವರಿಂದ ಪ್ರತಿಭಟನೆ ನಡೆಸಿತ್ತು. 6 ದಿನಗಳ ಕಾಲ ಅಧಿಕಾರಿಗಳ ದೌರ್ಜನ್ಯ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಇದೀಗ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.