ಮಂಗಳೂರು, ಮಾ.25 (DaijiworldNews/MB) : ನೇತ್ರಾವತಿ ಸೇತುವೆಯ ಮೇಲೆ ಎರಡು ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬ ನಿವಾಸಿ, ವಿದ್ಯಾರ್ಥಿ ಮಾರ್ಚ್ 24 ರ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿತ್ತು. ಕಡಬ ತಾಲ್ಲೂಕಿನ ಮರ್ದಳ ಬಳಿಯ ಕೆಮ್ಮಾಯಿ ನಿವಾಸಿ ಸಾನು ಅಬ್ರಹಾಂ (21) ಅವರ ಬೈಕು ಸ್ಕೂಟರ್ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದರು. ಸಾನು ಅಬ್ರಹಾಂ ನಗರದ ಖಾಸಗಿ ಹೋಟೆಲ್ ಮಾನೆಜ್ಮೆಂಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು.
ಮೃತಪಟ್ಟ ಸಾನು ಅವರ ತಾಯಿ ಎರಡು ವರ್ಷಗಳ ಹಿಂದೆ ಮಿಂಚು ಹೊಡೆದು ಮೃತಪಟ್ಟಿದ್ದರು. ಮೃತ ಸಾನು ಅವರು ತಂದೆ ಮತ್ತು ಸಹೋದರನನ್ನು ಅಗಲಿದ್ದಾರೆ.