ಉಡುಪಿ, ಮಾ. 26 (DaijiworldNews/SM): ಶಾಸಕ ಕೆ. ರಘುಪತಿ ಭಟ್ ರವರು ಮಾರ್ಚ್ 26ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದರು.
ಈ ಮೂಲಕ ರಾಜ್ಯದ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕೆಂದು ಅವರು ಕರೆ ನೀಡಿದರು.
ದೇಶವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸಬೇಕು ಎಂದರು. ಇನ್ನು ಈಗಾಗಲೇ ಹಲವು ಪ್ರಮುಖ ನಾಯಕರು ಲಸಿಕೆ ಪಡೆದುಕೊಂಡಿದ್ದು, ಜನಸಾಮಾನ್ಯರಲ್ಲಿರುವ ತಪ್ಪು ಕಲ್ಪನೆ ದೂರ ಮಾಡಲು ಜನನಾಯಕರು ಪ್ರೇರಣೆಯಾಗಿದ್ದಾರೆ.