ಕಾರ್ಕಳ, ಮಾ.28 (DaijiworldNews/MB) : ಜಾನುವಾರು ಕಳ್ಳತನ ಮಾಡಿ ಅದರ ವಧೆ ಮಾಡಿ ಮಾಂಸ ಮಾರಾಟ ಮಾಡಲು ಯೋಜಿಸಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಸಾಂದರ್ಭಿಕ ಚಿತ್ರ
ಬಂಧಿತನನ್ನು ರೆಂಜಾಳದ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಿಗ್ಗೆ 05:30 ಗಂಟೆಗೆ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ರೆಂಜಾಳ ಕಾಪು ಹೌಸ್ ಎಂಬಲ್ಲಿ ಮಾಂಸಕ್ಕಾಗಿ ಜಾನುವಾರುಗಳನ್ನು ಹಾಡಿಯಲ್ಲಿ ಕಟ್ಟಿ ಹಾಕಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರು, ಜನಾರ್ಧನ್ ಕೆ ಅವರಿಗೆ ದೊರೆತ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಲಾಗಿದ್ದು ಈ ವೇಳೆ ಓರ್ವ ಹಾಡಿಯಲ್ಲಿ ಓಡಿ ಪರಾರಿ ಆಗಿದ್ದು ಮತ್ತೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಎಲ್ಲಿಂದಲೋ ಜಾನುವಾರುಗಳನ್ನು ಕಳವು ಮಾಡಿಕೊಂಡು ಬಂದು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು. ಹಾಡಿಯಲ್ಲಿ ಸುಮಾರು 15,000 ರೂ. ಮೌಲ್ಯದ ನಸು ಕಂದು ಬಣ್ಣದ ದನ 01, ನಸು ಬಣ್ಣದ ಕರು 01, ನಸು ಕಂದು ಬಣ್ಣದ ಕರು -01, ನಸು ಕೆನೆ ಬಣ್ಣದ ಕರುವನ್ನು ಅವುಗಳ ಕುತ್ತಿಗೆಗೆ ನೈಲಾನ್ ಹಗ್ಗದಿಂದ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.