ಉಡುಪಿ, ಮಾ. 30 (DaijiworldNews/SM): ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಕೇಸ್ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಎಂಐಟಿ ಕ್ಯಾಂಪಸ್ಸಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದೆ. ಅದರಲ್ಲೂ ಎಂಐಟಿ ಕ್ಯಾಂಪಸ್ ನಲ್ಲಿ ಸಾವಿರಕ್ಕೂ ಅಧಿಕ ಕೇಸ್ ಪತ್ತೆ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಅವರು ಎಂಐಟಿ ಕ್ಯಾಂಪಸ್ ಗೆ ಭೇಟಿ ನೀಡಿ ಅಧಿಕಾರಿಗಳು, ಶಾಸಕರ ಸಭೆ ನಡೆಸಿ ನಿರ್ಧಿಷ್ಟ ಕ್ರಮಕ್ಕೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು ಒಂದೇ ಸಂಸ್ಥೆಯಲ್ಲಿ 950ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾಗಿದೆ.
ಕ್ಯಾಂಪಸ್ ನಲ್ಲಿ 11 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಹಿನ್ನೆಲೆ ನಿರ್ದಿಷ್ಟ ಕ್ರಮಕ್ಕೆ ಡಿಸಿಗೆ ಸೂಚಿಸಲಾಗಿದೆ. ಕ್ಯಾಂಪಸ್ ನಲ್ಲಿ 9000ಕ್ಕೂ ಹೆಚ್ವು ಟೆಸ್ಟ್ ಮಾದಲಾಗಿದೆ. ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣ ಇಲ್ಲ ಎಂಬುವುದು ಸಮಾಧಾನಕರ ವಿಚಾರವಾಗಿದೆ. ವಿದ್ಯಾರ್ಥಿಗಳು ಕೊರೋನಾ ಪಸರಿಸುವ ವಾಹಕ ಆಗುತ್ತಾರೆ. ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಮುಗಿದ ಮೇಲೆ ಮನೆಗೆ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಮಾಹೆ ವಿವಿಗೂ ಸೂಕ್ತ ಮುಂಜಾಗೃತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅತೀ ಹೆಚ್ಚು ವಿದ್ಯಾರ್ಥಿಗಳು ಇರೋದ್ರಿಂದ ಕೊರೋನಾ ಪಸರಿಸಿದೆ. ಕೊರೋನಾ ನಿಯಮ ಪಾಲಿಸದಿರೂದರಿಂದ ಸೋಂಕು ಹಬ್ಬಿದೆ. ಎಕ್ಸಾಮಿನೇಶನ್ ನಂತರ ಪಾರ್ಟಿ ಮಾಡಿರೋದ್ರಿಂದ ಕೊರೋನಾ ಹಬ್ಬಿರುವ ಸಾಧ್ಯತೆ ಇದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದರು.