ಮಂಗಳೂರು, ಮಾ 31 (DaijiworldNews/MS): ನಗರದ ಮರಕಡ ಜಂಕ್ಷನ್ ನಲ್ಲಿ ಖಾಸಗಿ ಬಸ್ಸಿನ ಅಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವಳು ಮೃತಪಟ್ಟ ದಾರುಣ ಘಟನೆ ಮಾ.31 ರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಚೆಲ್ಲಯ್ಯ ಅವರ ಪುತ್ರಿ, ಕಾವುರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಸಿ.ಪವಿತ್ರ (21) ಎಂದು ಗುರುತಿಸಲಾಗಿದೆ. ಪವಿತ್ರ ರಸ್ತೆ ದಾಟುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗಾ ಬಸ್ಸು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಈಕೆ ಮಂಗಳೂರು ವಿ.ವಿಯ ಪ್ರಥಮ ಎಂ.ಕಾಂ ವಿದ್ಯಾರ್ಥಿನಿಯಾಗಿದ್ದಾಳೆ.