ಮಂಜೇಶ್ವರ, ಮಾ. 31 (DaijiworldNews/SM): ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕೊಡ್ಲಮೊಗರು ಕಾನಾದ ವಿನೋದ್(25) ಮೃತಪಟ್ಟವರು.
ಇಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ವಿನೋದ್ ಸೋಮವಾರ ಬೆಳಿಗ್ಗೆ ತೆರಳಿದ್ದು ಮರಳಿ ಬಂದಿರಲಿಲ್ಲ. ನಾಪತ್ತೆ ಕುರಿತು ಮನೆಯವರು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ಶೋಧ ನಡೆಸಿದಾಗ ಮನೆಯಿಂದ ಸುಮಾರು 100 ಮೀಟರ್ ದೂರದ ಜನವಾಸ ಇಲ್ಲದ ಮನೆಯ ಬಾವಿಯೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.