ಉಡುಪಿ, ಏ. 07 (DaijiworldNews/SM): ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಸಿಬ್ಬಂದಿಯ ಕಣ್ಣೀರಿಟ್ಟು ತನ್ನನ್ನು ಡಿಪೋ ಮ್ಯಾನೇಜರ್ ಕೂಡಿ ಹಾಕಿದ್ದಾರೆ ಎಂಬ ಮೆಕ್ಯಾನಿಕ್ ಶ್ರೀಕಾಂತ್ ರೆಡ್ಡಿ ಅವರ ಆರೋಪ ಸುಳ್ಳು ಎಂದು ಡಿಪೋ ಮ್ಯಾನೇಜರ್ ತಳ್ಳಿಹಾಕಿದ್ದಾರೆ.
ಶ್ರೀಕಾಂತ್ ರೆಡ್ಡಿ ಇವತ್ತು ವೈಯಕ್ತಿಕವಾಗಿ ಸ್ವಯಿಚ್ಛೆಯಿಂದ ಕೆಲಸಕ್ಕೆ ಬಂದಿದ್ದಾರೆ. ಅವನನ್ನು ನಾವು ಕಚೇರಿಯಿಂದ ಕೆಲಸಕ್ಕೆ ಕರೆದಿಲ್ಲ. ಇವತ್ತು ನಮ್ಮ ಘಟಕದಲ್ಲಿ ತಾಂತ್ರಿಕ ಸಿಬ್ಬಂದಿಗಳು ವರದಿ ಮಾಡಿಲ್ಲ. ಚಾಲನಾ ಸಿಬ್ಬಂದಿಗಳು ಕೂಡ ಇವತ್ತು ಕರ್ತವ್ಯಕ್ಕೆ ಬಂದಿಲ್ಲ. ಹಾಗಿದ್ದರೂ ಆತ ಒಬ್ಬನೇ ಬಂದು ಕೆಲಸಕ್ಕೆ ವರದಿ ಮಾಡಿಕೊಂಡಿದ್ದಾನೆ. ಶ್ರೀಕಾಂತ ರೆಡ್ಡಿ ಓರ್ವ ಮದ್ಯವ್ಯಸನಿ. ಪದೇಪದೇ ಕರ್ತವ್ಯಕ್ಕೆ ಗೈರು ಹಾಜರಾಗುವ ಪ್ರವೃತ್ತಿ ಉಳ್ಳವನಾಗಿದ್ದಾನೆ. ಪ್ರಚಾರಕ್ಕಾಗಿ ಮಾಧ್ಯಮಗಳ ಮುಂದೆ ಕಟ್ಟುಕಥೆ ಹೇಳಿದ್ದಾನೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ಸಂಸ್ಥೆಯ ಇಮೇಜ್ ಹಾಳು ಮಾಡಲು ಈ ರೀತಿಯ ಹೇಳಿಕೆ ನೀಡಿದ್ದಾನೆ. ನಾನು ಆತನ ಮೇಲೆ ಯಾವುದೇ ರೀತಿಯ ಒತ್ತಡ ಹಾಕಿಲ್ಲ ಎಂಬುವುದಾಗಿ ಉಡುಪಿಯ ಕೆ.ಎಸ್.ಆರ್.ಟಿ.ಸಿ ಮ್ಯಾನೇಜರ್ ಉದಯ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.