ಮಂಗಳೂರು, ಏ 8 (DaijiworldNews/MS): ನಗರದ ಹಲವೆಡೆ ದೈವಸ್ಥಾನಗಳ ಕಾಣಿಕೆ ಹುಂಡಿಗೆ ಅನಪೇಕ್ಷಿತ ವಸ್ತುಗಳನ್ನು ಹಾಕಿ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದ ಇಬ್ಬರು ಶಂಕಾಸ್ಪದ ಆರೋಪಿಗಳ ವಿರುದ್ದ ಪೂರಕ ಸಾಕ್ಷ್ಯ ದೊರೆತಿಲ್ಲ ಎಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಾಸ್ಪದ ಆರೋಪಿಗಳು
ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ಅವರನ್ನು ಠಾಣೆಗೆ ಕರೆಯಿಸಿ 4 ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು ಅವರ ವಿರುದ್ದ ಸೆಕ್ಷನ್ 160 ರನ್ವಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ. ಇದಕ್ಕೆ ಪೂರಕ ಸಾಕ್ಷ್ಯಗಳು ದೊರೆತಿಲ್ಲ. ಹಾಗಾಗಿ ಸಾಕ್ಷ್ಯಿಗಳು ದೊರೆತ ತಕ್ಷಣ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅವರು ಈಗಲೂ ಶಂಕಾಸ್ಪದ ಆರೋಪಿಗಲು ಆಗಿದ್ದಾರೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
" ತಮ್ಮ ಸ್ನೇಹಿತನಾಗಿದ್ದು ನವಾಜ್ ಕೆಲವು ದೈವಸ್ಥಾನಗಳನ್ನು ಅಪವಿತ್ರಗೊಳಿಸುವ ಕೃತ್ಯವೆಸಗಿದ್ದು , ಆತ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಾಗ ನಮಗೂ ಭಯವಾಗಿದೆ. ಅದಕ್ಕಾಗಿ ಎಮ್ಮೆಕೆರೆ-ಕೊರಗಜ್ಜನ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಲು ಬಂದಿದ್ದೇವೆ ಎಂದು ಇಬ್ಬರು ಶಂಕಾಸ್ಪದ ಆರೋಪಿಗಳು ಹೇಳಿದ್ದಾರೆ. ಆದರೆ ಅವರು ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡಿದ್ದರು ಎಂಬುವುದಕ್ಕೆ ಪೂರಕ ಸಾಕ್ಷಿ ದೊರಕಿದ ಬಳಿಕ ಬಂಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.