ಮಂಗಳೂರು, ಏ. 09 (DaijiworldNews/SM): ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎರಡು ವಿಚಾರದಲ್ಲಿ ಸ್ವಷ್ಟವಾಗಿ ಉತ್ತರ ಕೊಟ್ಟಿದ್ದಾರೆ. ಅವರು ಹೇಳಿದ ಮೇಲೆ ಬೇರೆ ಯಾವುದೇ ಗೊಂದಲಗಳಿಗೂ ಅವಕಾಶವಿಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಡಿಸಿಎಂ ಅಶ್ವಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಹೇಳಿಕೆ ನೀಡ್ತಿರೋ ಶಾಸಕ ಬಸನಗೌಡ ಯತ್ನಾಳ್ ಕುರಿತು ಅರುಣ್ ಸಿಂಗ್ ಸ್ವಷ್ಟವಾಗಿ ಹೇಳಿದ್ದಾರೆ. ವರಿಷ್ಠರು ಕೂಡಾ ಯತ್ನಾಳ್ ಗೆ ನೋಟಿಸ್ ಕೊಟ್ಟಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಇನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವದ ಬದಲಾವಣೆ ಇಲ್ಲ ಎಂದಿರುವ ಅವರು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.