ಕುಂದಾಪುರ, ಏ 10 (DaijiworldNews/MS):ಇಲ್ಲಿನ ಸಮೀಪದ ಸೌಕೂರು ಎಂಬಲ್ಲಿ ಬಾವಿಗೆ ಬಿದ್ದಿದ್ದ ಹೆಣ್ಣು ಚಿರತೆಯನ್ನು ರಕ್ಷಿಸಲಾಗಿದೆ.
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದ ಅಶೋಕ ದೇವಾಡಿಗ ಎನ್ನುವವರ ಅಂದಾಜು 30 ಅಡಿಯ ಬಾವಿಗೆ ಚಿರತೆ ಬಿದ್ದಿರುವುದನ್ನು ಕಂಡ ಮನೆಯವರು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಿದ್ದಾರೆ.
ಹಗ್ಗ ಹಾಗೂ ಬುಟ್ಟಿಯನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿದೆ. ಚಿರತೆಗೆ 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.